ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಹೆಸರು ಬಹುತೇಕ ಪಕ್ಕಾ ಆಗಿದೆ. ಕಾಂಗ್ರೆಸ್ ಹೈಕಮಾಂಡ್???ನಿಂದ ಅಧಿಕೃತ ಘೋಷಣೆ ಬಾಕಿ ಇದ್ದು ರಾಹುಲ್ ಗಾಂಧಿ ಭೇಟಿ ಬಳಿಕ ಅಧಿಕೃತ ಘೋಷಣೆ ಸಾಧ್ಯತೆ. ರಾಹುಲ್ ಗಾಂಧಿಯವರು ಸಿದ್ದರಾಮಯ್ಯ, ಡಿಕೆಶಿ ಜತೆ ಮಾತುಕತೆ ನಡೆಸಿ ಚರ್ಚೆ ಬಳಿಕ ಘೋಷಣೆ ಸಾಧ್ಯತೆ.
ನಾಳೆ ಪ್ರಮಾಣ ವಚನಕ್ಕೆ ಭರದ ಸಿದ್ದತೆ
ಮೇ೧೮ರ ಮಧ್ಯಾಹ್ನ ೩.೩೦ ಕ್ಕೆ ಪ್ರಮಾಣ ವಚನ ಕಾರ್ಯಕ್ರಮಕ್ಕೆ ತಯಾರಿ ನಡೆಯುತ್ತಿದೆ. ನಾಳೆ ತಪ್ಪಿದರೆ ಶನಿವಾರ ಕಾರ್ಯಕ್ರಮ ನಿಗದಿ ಮಾಡುವ ಬಗ್ಗೆ ಕಾಂಗ್ರೆಸ್ ನಲ್ಲಿ ಚರ್ಚೆಗಳಾಗುತ್ತಿವೆ. ಶುಕ್ರವಾರ ಅಮಾವಾಸ್ಯೆ ಇರುವ ಹಿನ್ನಲೆ ಪ್ರಮಾಣ ವಚನ ಬೇಡ ಎಂಬ ಬಗ್ಗೆ ಕೆಲವರು ಸಲಹೆ ನೀಡಿದ್ದಾರೆ. ಈಗಾಗಲೇ ತಯಾರಿ ಬಗ್ಗೆ ನಾಯಕರಿಂದ ಸೂಚನೆ ನೀಡಲಾಗಿದೆ ಎಂಬ ಬಗ್ಗೆ ಮಾಹಿತಿ ಸಿಕ್ಕಿದೆ.
ಸಿದ್ದರಾಮಯ್ಯ ನಿವಾಸದ ಮುಂದೆ ಹೆಚ್ಚಿದ ಪೊಲೀಸ್ ಭದ್ರತೆ
ಸಿದ್ದರಾಮಯ್ಯ ಅಭಿಮಾನಿಗಳು ನಿವಾಸದ ಬಳಿ ಬರುವ ಮುನ್ಸೂಚನೆ ಹಿನ್ನಲೆ ಭದ್ರತೆ ಹೆಚ್ಚಿಸಲಾಗಿದೆ. ಒಂದು ಕೆಎಸ್ಆರ್?ಪಿ ವ್ಯಾನ್, ೭೦ ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ. ಕುಮಾರಕೃಪಾ ಬಳಿ ಇರುವ ಸಿದ್ದು ಸರ್ಕಾರಿ ನಿವಾಸದಲ್ಲಿ ಭದ್ರತೆ ಹೆಚ್ಚಿಸಲಾಗಿದೆ.
ಡಿಕೆ ಶಿವಕುಮಾರ್ಗೆ ಉಪಮುಖ್ಯಮಂತ್ರಿ ಸ್ಥಾನ ಸಾಧ್ಯತೆ
ಸಿದ್ದರಾಮಯ್ಯರಿಗೆ ಸಿಎಂ ಸ್ಥಾನ, ಡಿಕೆ ಶಿವಕುಮಾರ್?ಗೆ ಉಪಮುಖ್ಯಮಂತ್ರಿ ಸ್ಥಾನ ನೀಡುವ ಸಾಧ್ಯತೆ ಇದೆ. ಡಿಕೆ ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಗಿಯೂ ಮುಂದುವರಿಯಲಿದ್ದಾರೆ. ಅಧ್ಯಕ್ಷ ಹುದ್ದೆ ಜೊತೆ ಎರಡು ಪ್ರಮುಖ ಖಾತೆಗಳಿಗೆ ಡಿಕೆಶಿ ಆಯ್ಕೆ ಮಾಡುವ ಸಾಧ್ಯತೆ ಇದೆ ಎಂಬ ಬಗ್ಗೆ ಮಾಹಿತಿ ಸಿಕ್ಕಿದೆ. ಇಂಧನ ಮತ್ತು ನೀರಾವರಿ ಮೇಲೆ ಡಿಕೆ ಶಿವಕುಮಾರ್ ಕಣ್ಣಿಟ್ಟಿದ್ದಾರೆ ಎನ್ನಲಾಗಿದೆ.