ಮೈಸೂರು: ಕುಮಾರಸ್ವಾಮಿ ಹೊಟ್ಟೆಕಿಚ್ಚಿನಿಂದ ದ್ವೇಷದಿಂದ ಸುಳ್ಳು ಸುಳ್ಳು ಆರೋಪ ಮಾಡುತ್ತಿದ್ದಾರೆ. ನಮಗೆ ರಾಜಕೀಯದಲ್ಲಿ ದ್ವೇಷ ಗೊತ್ತಿಲ್ಲ. ನಾವು ಯಾರಾದರೂ ತಪ್ಪು ಮಾಡಿದ್ದರೆ ಅದನ್ನ ಒಪ್ಪುವುದಿಲ್ಲ. ಆಗಂತ ನಾವೂ ದ್ವೇಷದ ರಾಜಕೀಯ ಮಾಡಿಲ್ಲ ಮಾಡುವುದೂ ಇಲ್ಲ.
ಕುಮಾರಸ್ವಾಮಿ ಹೇಳುವುದೆಲ್ಲಾ ಸುಳ್ಳು ಕುಮಾರಸ್ವಾಮಿ ಇವತ್ತಿನವರೆಗೆ ಯಾವುದಾದರೂ ಸತ್ಯ ಹೇಳಿದ್ರೆ ತೋರಿಸಿ. ಸುಳ್ಳೆ ಕುಮಾರಸ್ವಾಮಿ ಮನೆದೇವರಾಗಿದೆ. ಒಂದೇ ಒಂದು ವಿಚಾರದಲ್ಲಿ ಸತ್ಯ ಹೇಳಿದ್ದಾರಾ ಹೇಳಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದರು.
ಬೆಂಗಳೂರಿನಿಂದ ಮೈಸೂರಿನ ಮಂಡಕಹಳ್ಳಿ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಸಿಎಂ ಸಿದ್ದರಾಮಯ್ಯರನ್ನ ಬರಮಾಡಿಕೊಂಡ ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಸಿ ಮಹದೇವಪ್ಪ, ಶಾಸಕ ದರ್ಶನ್ ಧ್ರುವನಾರಾಯಣ್ ಸೇರಿ ಕಾಂಗ್ರೆಸ್ ನಾಯಕರು.
ಮಂಡಕಹಳ್ಳಿ ವಿಮಾನ ನಿಲ್ದಾಣದಲ್ಲಿ ಸಿದ್ದರಾಮಯ್ಯರಿಗೆ ಪೊಲೀಸರಿಂದ ಗೌರವ ವಂದನೆ ಸಲ್ಲಿಸಿದರು.
ಬಳಿಕ ಮಾತನಾಡಿ, ಭಾರತ ಈ ಬಾರಿ ವಿಶ್ವಕಪ್ ಗೆದ್ದೇ ಗೆಲ್ತಾರೆ ಎಂದು ಹೇಳಿದರು.
ಭಾರತ – ಆಸ್ಟ್ರೇಲಿಯಾ ವಿಶ್ವಕಪ್ ಫೈನಲ್ ಪಂದ್ಯ.ಭಾರತ ಆಸ್ಟ್ರೇಲಿಯಾ ವಿರುದ್ಧ ಗೆಲುವು ಸಾಧಿಸುವ ವಿಶ್ವಾಸ ಇದೆ. ನಾನು ಬೆಂಗಳೂರಿನಲ್ಲಿ ಒಂದು ಪಂದ್ಯ ನೋಡಿದ್ದೆ. ನ.19 ರಂದು ನಡೆಯಲಿರುವ ಪಂದ್ಯವನ್ನ ವೀಕ್ಷಣೆ ಮಾಡ್ತೀನಿ.
ಭಾರತ ತಂಡದ ಎಲ್ಲಾ ಆಟಗಾರರು ಚೆನ್ನಾಗಿ ಆಟವಾಡ್ತಿದ್ದಾರೆ. ಇದೇ ರೀತಿ ಎಲ್ಲರೂ ಒಗ್ಗೂಡಿ ಹೋರಾಡಿದರೆ ಗೆಲ್ತಾರೆ. ನಮ್ಮ ತಂಡ ಈ ಬಾರಿ ಗೆಲ್ಲುವ ನಂಬಿಕೆ ಇದೆ. ಟೀಂ ಆಗಿ ಆಟವಾಡಿದರೆ ಗೆಲುವು ಸಾಧ್ಯ. ಎಲ್ಲರೂ ಒಗ್ಗೂಡಿ ಉತ್ತಮವಾಗಿ ಆಟವಾಡಲಿ. ನಾನು ರಾತ್ರಿ 9.30 ಮೇಲೆ ಮನೆಗೆ ಹೋಗುವುದು. ಸಮಯ ಸಿಕ್ಕಾಗ ನಾನು ಮನೆಯಲ್ಲಿ ಕ್ರಿಕೆಟ್ ನೋಡ್ತೀನಿ. ಫೈನಲ್ ಮ್ಯಾಚ್ ನೋಡ್ತಿನಿ ಎಂದರು.
ಕುಮಾರಸ್ವಾಮಿ ಬರೀ ಹಿಟ್ ಅಂಡ್ ರನ್ ಮಾಡುತ್ತಾರೆ. ನನ್ನ ಮಗನ ವಿಚಾರದಲ್ಲಿ ನಿನ್ನೆ ಸುಮ್ಮನೆ ಸುಳ್ಳು ಹಬ್ಬಿಸಿದ್ದರು. ನನ್ನ ಮಗ ನನಗಾಗಿ ಕ್ಷೇತ್ರ ಬಿಟ್ಟುಕೊಟ್ಟಿದ್ದಾನೆ. ಈಗ ನನ್ನ ಪರವಾಗಿ ಕ್ಷೇತ್ರದಲ್ಲಿ ಜನರ ಕೆಲಸ ಮಾಡುತ್ತಿದ್ದಾನೆ. ಜನರ ಕೆಲಸ ಮಾಡುವುದು ತಪ್ಪಾ, ಕೆಡಿಪಿ ಸದಸ್ಯನಾಗಿರುವ ಕಾರಣ ಕೆಲವು ವಿಚಾರಗಳ ಬಗ್ಗೆ ನನ್ನ ಜೊತೆ ಚರ್ಚೆ ಮಾಡಿದ್ದಾನೆ.ಅದಕ್ಕೆ ಬೇರೆ ಬೇರೆ ಅರ್ಥ ಕಲ್ಪಿಸಿದ್ರೆ ಹೇಗೆ ಹೇಳಿ? ಎಂದರು.
ಮೋದಿಗೆ ನನ್ನ ಕಂಡರೆ ಭಯ. ಹೀಗಾಗಿಯೇ ಪಂಚ ರಾಜ್ಯ ಚುನಾವಣೆಯಲ್ಲಿ ನಮ್ಮ ಬಗ್ಗೆ ಮಾತನಾಡುತ್ತಾರೆ. ಗ್ಯಾರೆಂಟಿಗಳ ಟೀಕಿಸಿದ ಮೋದಿ ಈಗ ಅದೇ ಗ್ಯಾರೇಂಟಿಗಳನ್ನೇ ಬೇರೆ ಕಡೆ ಘೋಷಣೆ ಮಾಡುತ್ತಿರುವ ಅರ್ಥ ಏನು? ರಾಜ್ಯದಲ್ಲಿ ಶೇ.40% ಸರ್ಕಾರ ಎಂದು ಕರೆಯುತ್ತಿದ್ದು ಯಾರನ್ನ? ನಮ್ಮನ್ನೇನು ಆ ರೀತಿ ಕರೆಯುತ್ತಿಲ್ಲ. ಈ ಸತ್ಯ ಗೊತ್ತಿದ್ದರು ಸುಮ್ಮನೆ ನಮ್ಮ ಬಗ್ಗೆ ಮಾತನಾಡುತ್ತಾರೆ.
ಪಂಚರಾಜ್ಯ ಚುನಾವಣೆಯಲ್ಲಿ ಕಾಂಗ್ರೆಸ್ಗೆ ಜಯ ಸಿಗುವ ಬಗ್ಗ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು. ಇಂದು ಮತದಾನ ನಡೆಯುತ್ತಿದೆ.
ತೆಲಂಗಾಣ, ಮಧ್ಯಪ್ರದೇಶ್, ಛತ್ತೀಸ್ಗಡ, ರಾಜ್ಯಸ್ಥಾನ ಎಲ್ಲ ಕಡೆ ಕಾಂಗ್ರೆಸ್ ಗೆಲ್ಲುತ್ತದೆ. ಈ ಚುನಾವಣೆಯ ಫಲಿತಾಂಶ ಲೋಕಸಭೆ ಚುನಾವಣೆ ಮೇಲೆ ಪರಿಣಾಮ ಬೀರಲ್ಲ. ಈಗ ನವೆಂಬರ್ನಲ್ಲಿ ಇದ್ದೇವೆ. ಲೋಕಸಭೆ ಚುನಾವಣೆಗೆ ಮಾರ್ಚ್ ಕೊನೆಯಲ್ಲಿ ನೋಟಿಫಿಕೇಷನ್ ಆಗಲಿದೆ.
ರಾಮಮಂದಿರ ಹೊಸ ವಿಚಾರ ಅಲ್ಲ. ರಾಮಮಂದಿರಕ್ಕೆ ನಮ್ಮ ವಿರೋಧ ಇಲ್ಲ. ಸುಪ್ರೀಂಕೋರ್ಟ್ನಲ್ಲಿ ತೀರ್ಮಾನ ಆಗಿದೆ. ಅದರಂತೆ ದೇವಾಲಯ ನಿರ್ಮಾಣ ಆಗುತ್ತಿದೆ. ರಾಮಮಂದಿರದಿಂದ ಮತದಾರರು ಬದಲಾವಣೆ ಆಗುತ್ತಾರೆ ಅನ್ನೋದು ತಪ್ಪು.
ದೇಶದ ಜನ ವಿವಿಧತೆಯಲ್ಲಿ ಏಕತೆ ಬಯಸುತ್ತಾರೆ. ಬ್ರಿಟೀಷರು, ಮೊಘಲರ ದಾಳಿಯ ನಂತರವೂ ದೇಶ ಒಂದಾಗಿದೆ. ಬೇರೆ ಬೇರೆ ದೇಶ, ಭಾಷೆ ಇದ್ದರೂ ಒಗ್ಗಟ್ಟು ಇದೆ. ನಾವು ಒಳಗೊಳ್ಳುವಿಕೆಯಲ್ಲಿ ನಂಬಿಕೆ ಇಟ್ಟುಕೊಂಡವರು ಎಂದರು. ಜೆಡಿಎಸ್ ಬಿಜೆಪಿ ಶಾಸಕರು ಕಾಂಗ್ರೆಸ್ ಗೆ ಕರೆತರುವ ವಿಚಾರ.
ಮಾಜಿ ಸಚಿವ ವಿ.ಸೋಮಣ್ಣ ಪಕ್ಷಕ್ಕೆ ಬಂದರು ಸ್ವಾಗತಿಸುತ್ತೇನೆ. ಕಾಂಗ್ರೆಸ್ ಪಕ್ಷದ ತತ್ವ ಸಿದ್ದಾಂತವನ್ನ ಒಪ್ಪಿ ಯಾರೇ ಬಂದರೂ ಸ್ವಾಗತಿಸುತ್ತೇನೆ. ಜಿ.ಟಿ ದೇವೇಗೌಡ ಹಾಗೂ ಸೋಮಣ್ಣ ಪಕ್ಷಕ್ಕೆ ಆಹ್ವಾನಿಸಿರುವ ಬಗ್ಗೆ ನನಗೆ ಮಾಹಿತಿ ಇಲ್ಲ ಎಂದರು.
ಎಚ್ ಡಿಕೆ ಹೇಳಿಕೆಗೆ ಇದುವರೆವಿಗೂ ಎಲ್ಲಾದರೂ ಸಾಕ್ಷಿ ಕೊಟ್ಟಿದ್ದಾರಾ: ಸಿಎಂ ಸಿದ್ದು ಪ್ರಶ್ನೆ
![](https://stateroute.in/wp-content/uploads/no-image.jpg)