ಮಂಡ್ಯ: ಕರ್ನಾಟಕ ವಿಧಾನಸಭಾ ಚುನಾವಣೆ ಹೊಸ್ತಿಲಿನಲ್ಲಿ ಚುನಾವಣಾ ಅಧಿಕಾರಿಗಳು ಅಭ್ಯರ್ಥಿಗಳಿಗೆ ಶಾಕ್ ನೀಡಿದ್ದಾರೆ. ಮಂಡ್ಯದ ಮದ್ದೂರು ಕ್ಷೇತ್ರದ ಕಾಂಗ್ರೆ¸ ಅಭ್ಯರ್ಥಿ ಕೆಎಂ ಉದಯ್ ಬೆಂಬಲಿಗರ ಮನೆ ಮೇಲೆ ದಾಳಿ ನಡೆಸಿರುವ ಅಧಿಕಾರಿಗಳು ಬರೋಬ್ಬರಿ 2 ಕೋಟಿ ರೂ.ಗೂ ಅಧಿಕ ಹಣವನ್ನು ಪತ್ತೆ ಹಚ್ಚಿದ್ದಾರೆ.
ಕೆಎಂ ಉದಯ್ ಬೆಂಬಲಿಗ ಮದ್ದೂರು ಪಟ್ಟಣದ ದೊಡ್ಡಿ ಬೀದಿಯ ಸುರೇಶ್ ಹಾಗೂ ರಮೇಶ್ ಮನೆ ಮೇಲೆ ಫ್ಲೆöÊಯಿಂಗ್ ಸ್ಕಾ÷್ವಡ್ ತಂಡ ದಾಳಿ ನಡೆಸಿದೆ. ಬೆಳ್ಳಂಬೆಳಗ್ಗೆ 5:30ರ ವೇಳೆಗೆ ಅಧಿಕಾರಿಗಳು ದಾಳಿ ಮಾಡಿದ್ದು, 2 ಕೋಟಿ ರೂ.ಗೂ ಅಧಿಕ ಹಣವನ್ನು ಪತ್ತೆ ಹಚ್ಚಿ ಅದನ್ನು ವಶಪಡಿಸಿಕೊಂಡಿದ್ದಾರೆ.
ಸುರೇಶ್ ಮನೆಯಲ್ಲಿ 2 ಕೋಟಿ ರೂ. ಪತ್ತೆಯಾಗಿದ್ದು, ರಮೇಶ್ ಮನೆಯಲ್ಲಿ 3.50 ಲಕ್ಷ ರೂ. ಪತ್ತೆಯಾಗಿದೆ. ಚುನಾವಣಾ ಅಧಿಕಾರಿಗಳು ಹಣವನ್ನು ಮದ್ದೂರು ಪೊಲೀಸರ ವಶಕ್ಕೆ ನೀಡಿದ್ದಾರೆ. ಮಾತ್ರವಲ್ಲದೇ ಪೊಲೀಸರು ಸುರೇಶ್ ಬಾಬು ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.