ನಂಜನಗೂಡು: ತಾಲೂಕಿನ ಈರೇಗೌಡನ ಹುಂಡಿ ಗ್ರಾಮದಲ್ಲಿ ಅನುಮಾನಾಸ್ಪದವಾಗಿ ರೈತ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಗ್ರಾಮದ 37 ವರ್ಷದ ಮಣಿಕಂಠ ಎಂಬಾತ ನೇಣಿಗೆ ಶರಣಾದ ಯುವಕ. ಕೆಲ ವರ್ಷಗಳಿಂದ ಹೆಡಿಯಾಲ ಗ್ರಾಮದ ತಾತನ ಮನೆಯಲ್ಲಿ ವಾಸವಾಗಿದ್ದನು ಎನ್ನಲಾಗಿದೆ. ಜಮೀನಿನಲ್ಲಿ ಬೆಳದಿದ್ದ ಬೆಳೆ ರಕ್ಷಣೆಗಾಗಿ ರಾತ್ರಿಯ ವೇಳೆ ಕಾವಲಿದ್ದ ಮಣಿಕಂಠ ಅನುಮಾನಾಸ್ಪದ ರೀತಿಯಲ್ಲಿ ನೇಣು ಬಿಗಿದು
ಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ.
ಮೃತನ ತಾಯಿ ಸಣ್ಣದೇವಮ್ಮ ಮಗನನ್ನು ಕಳೆದುಕೊಂಡ ಆಕ್ರಂದನ ಮುಗಿಲು ಮುಟ್ಟಿದೆ.
ವಿಷಯ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ನಂಜನಗೂಡು ವೃತ್ತ ನಿರೀಕ್ಷಕ ಚಂದ್ರಶೇಖರ್, ಹುಲ್ಲಳ್ಳಿ ಪಿ.ಎಸ್.ಐ. ರಮೇಶ್ ಕರಕಿಕಟ್ಟಿ ಪರಿಶೀಲನೆ ನಡೆಸಿ ಪ್ರಕರಣವನ್ನು ದಾಖಲು ಮಾಡಿಕೊಂಡು ಮುಂದಿನ ತನಿಖೆ ಕೈಗೊಂಡು ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನೆ ಮಾಡಿದ್ದಾರೆ.
ಈ ಸಂಬಂಧ ಹುಲ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನೇಣು ಬಿಗಿದುಕೊಂಡು ರೈತ ಆತ್ಮಹತ್ಯೆ
![](https://stateroute.in/wp-content/uploads/no-image.jpg)