ಮೈಸೂರು: ಹೋರಾಟದ ನೆಪದಲ್ಲಿ ರಾಜಕೀಯ ಪಕ್ಷಗಳ ಮುಖಂಡರೊಂದಿಗೆ ರಾಜೀಮಾಡಿಕೊಂಡು ರಾಜ್ಯ ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ ಅಕ್ರಮವಾಗಿ ಸಂಪಾದನೆ ಮಾಡಿರುವ ಆಸ್ತಿಗಳ ಕುರಿತಂತೆ ಸಮಗ್ರ ತನಿಖೆ ನಡೆಸಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ರೈತ ಬಣ ಅಧ್ಯಕ್ಷ ಇ.ಎನ್.ಕೃಷ್ಣೇಗೌಡ ಒತ್ತಾಯಿಸಿದರು.
ನಗರದ ಜಲದರ್ಶಿನಿ ಅತಿಥಿಗೃಹದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿ, ನಾಗೇಂದ್ರ ಅವರ ಬೇನಾಮಿ ಆಸ್ತಿಯ ಬಗ್ಗೆ ಆರ್ಟಿಸಿಯನ್ನು ಸಂಗ್ರಹಿಸಿದ್ದನ್ನು ಬಿಡುಗಡೆ ಮಾಡಲಾಗಿದ್ದು,ಮುಂದಿನ ದಿನಗಳಲ್ಲಿ ಮತ್ತಷ್ಟು ಅಕ್ರಮಗಳನ್ನು ಬಹಿರಂಗಪಡಿಸಲಾಗುವುದು ಎಂದರು. ಮುಖಂಡರಾದ ಚಂದ್ರಶೇಖರ ಬೋವಿ ಗೋಷ್ಠಿಯಲ್ಲಿದ್ದರು.
ಬಡಗಲಪುರ ನಾಗೇಂದ್ರ ಆಸ್ತಿ ತನಿಖೆಗೆ ಆಗ್ರಹ
![](https://stateroute.in/wp-content/uploads/no-image.jpg)