ಮೈಸೂರು: ಸರ್ಕಾರಿ ದಾಖಲಾತಿಯಲ್ಲಿ ಮುಂದಡಿಯಲ್ಲಿರುವ ಜಿಲ್ಲಾ ಉಸ್ತುವಾರಿ ಸಚಿವರ ಕ್ಷೇತ್ರದ ತಿ.ನರಸೀಪುರದ ಪಟ್ಟಣದಲ್ಲಿರುವ ಹೆಣ್ಣು ಮಕ್ಕಳ ಸರ್ಕಾರಿ ಪ್ರೌಢಶಾಲೆಯೇ ಮೂಲಭೂತ ಸೌಕರ್ಯದಿಂದ ದೂರಳಿದಿದ್ದು, ತಿಂಗಳಲ್ಲಿ ಸೌಲಭ್ಯ ಕಲ್ಪಿಸದಿದ್ದರೆ ಹೋರಾಟ ನಡೆಸುವುದಾಗಿ ಆಮ್ ಆದ್ಮಿ ಪಕ್ಷ ಎಚ್ಚರಿಕೆ ನೀಡಿದೆ.
ಈ ಸಂಬಂಧ ನಗರದ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿದ ಎಎಪಿ ಜಿಲ್ಲಾಧ್ಯಕ್ಷ ರಂಗಯ್ಯ ಮಾತನಾಡಿ, ಮುಖ್ಯಮಂತ್ರಿಗಳ ಜಿಲ್ಲೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಕ್ಷೇತ್ರದ ಪಟ್ಟಣದಲ್ಲೇ ಇಂತಹ ಸ್ಥಿತಿ ಶೋಚನೀಯ. ತಿ.ನರಸೀಪುರ ಪಟ್ಟಣದ ಸರ್ಕಾರಿ ಹಿರಿಯ ವಿದ್ಯಾರ್ಥಿನಿಯರ ಪ್ರೌಢಶಾಲೆಯಲ್ಲಿ ೩೫೦ರಿಂದ ೨೭೫ಕ್ಕೆ ಕ್ಷೀಣಿಸಿದೆ. ಇದಕ್ಕೆ ಕಾರಣ ಕೇಳಿದಾಗ ಶಾಲೆಯಲ್ಲಿ ಶೌಚಾಲಯದ ವ್ಯವಸ್ಥೆಯಿಲ್ಲ. ಕಾಂಪೌಂಡ್ ವ್ಯವಸ್ಥೆ ಸೇರಿ ಸರ್ಕಾರಿ ಶಾಲೆ ಅನೇಕ ಮೂಲಭೂತ ವ್ಯವಸ್ಥೆ ಇಲ್ಲದಂತಾಗಿದೆ. ಒಂದು ತಿಂಗಳಲ್ಲಿ ವ್ಯವಸ್ಥೆ ಸರಿಪಡಿಸಿ ಮೂಲಭೂತ ಸೌಕರ್ಯಕಲ್ಪಿಸದಿದ್ದರೆ ಉಗ್ರ ಹೋರಾಟ ನಡೆಸುವುದಾಗಿ ಹೇಳಿದರು. ಎಎಪಿಯ ರಾಜ್ಯ ಕಾರ್ಯದರ್ಶಿ ಸೋಸಲೆ ಸಿದ್ದರಾಜು, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಉಷಾ ಸಂಪತ್, ಕಾರ್ಯದರ್ಶಿ ವಿಶ್ವನಾಥ್ ಕುಲಕರ್ಣಿ, ತಾಲ್ಲೂಕು ಪ್ರಧಾನ ಕಾರ್ಯದರ್ಶಿ ಶಿವಣ್ಣ ಗೋಷ್ಠಿಯಲ್ಲಿದ್ದರು.