ಬೆಂಗಳೂರು: ಬಹು ಕೋಟಿ ಒಡತಿ, ಸರಳ, ಸಜ್ಜನ, ಪರೋಪಕಾರಿ ಗುಣವನ್ನು ಹೊಂದಿರುವ ಇನ್ಫೋಸಿಸ್ ಮುಖ್ಯಸ್ಥೆ ಡಾ ಸುಧಾಮೂರ್ತಿಯವರ ಹೆಸರು ಬಳಸಿಕೊಂಡು ವಂಚನೆ ಮಾಡಲಾಗುತ್ತಿದ್ದು ಸುಧಾಮೂರ್ತಿಯವರ PA ಮಮತ ಸಂಜಯ್ ಎಂಬುವವರು ಈ ಬಗ್ಗೆ ಜಯನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಶೃತಿ ಹಾಗೂ ಲಾವಣ್ಯ ಎಂಬುವರ ವಿರುದ್ದ ದೂರು ದಾಖಲಾಗಿದೆ. ಆರೋಪಿಗಳು ಸುಧಾಮೂರ್ತಿಯವರ ಪೋಟೋಗಳನ್ನ ಬಳಸಿ ಜಾಹಿರಾತು ನೀಡಿ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ ಎಂದು ಟಿಕೆಟ್ ಮಾರಾಟ ಮಾಡಿ ವಂಚಿಸುತ್ತಿದ್ದರು. ಸದ್ಯ ವಂಚನೆ ಬೆಳಕಿಗೆ ಬಂದಿದ್ದು ಇಬ್ಬರ ವಿರುದ್ಧ ಪ್ರಕರಣ ದಾಖಲಾಗಿದೆ.
KKNC (Kannada koota of Northen California) ದಿಂದ 50 ನೇ ವರ್ಷದ ಕಾರ್ಯಕ್ರಮಕ್ಕೆ ಸುಧಾಮೂರ್ತಿಯವರಿಗೆ ಆಹ್ವಾನಿಸಲಾಗಿತ್ತು. ಆದ್ರೆ ಕಾರಣಾಂತರಗಳಿಂದ ಕಾರ್ಯಕ್ರಮಕ್ಕೆ ಬರಲು ಆಗುವುದಿಲ್ಲವೆಂದು ಇಮೇಲ್ ಮೂಲಕ Dr.ಸುಧಾಮೂರ್ತಿ ಅವರು ಸಂದೇಶ ಕಳಿಸಿದ್ದರು. ಈ ಮಧ್ಯೆ ಕಿಡಿಗೇಡಿಗಳು ಸಮಯ ಬಳಿಸಿಕೊಂಡು ಸುಧಾಮೂರ್ತಿಯವರ ಪೋಟೋಗಳನ್ನ ಬಳಸಿ KKNC ಕಾರ್ಯಕ್ರಮಕ್ಕೆ ಬರುತ್ತಾರೆಂದು ಸಾಮಾಜಿಕ ಜಾಲತಾಣದಲ್ಲಿ ಜಾಹಿರಾತು ನೀಡಿ ಕಾರ್ಯಕ್ರಮಕ್ಕೆ ಟಿಕೆಟ್ ಮಾರಾಟ ಮಾಡಿದ್ದಾರೆ. ಮೂರ್ತಿ ಟ್ರಸ್ಟ್ನ ಕಚೇರಿ ಎಂದು ಹೆಸರು ಸೃಷ್ಠಿಸಿ ಸುಧಾಮೂರ್ತಿಯವರ ಅಸಿಸ್ಟೆಂಟ್ ಎಂದು ವಂಚಿಸಿದ್ದಾರೆ. ಲಾವಣ್ಯ ಎಂಬುವರು ಕಾರ್ಯಕ್ರಮಕ್ಕೆ ಸುಧಾಮೂರ್ತಿ ಮೇಡಂ ಬರೋದಾಗಿ ಹೇಳಿ ವಂಚನೆ ಮಾಡಿದ್ದಾರೆ. ಈ ಬಗ್ಗೆ KKNC ಕಾರ್ಯಕ್ರಮ ಆಯೋಜನೆ ಮಾಡುವವರಿಗೆ ಕರೆ ಮಾಡಿ ವಿಚಾರಿಸಿದಾಗ ಸುಧಾಮೂರ್ತಿಯವರ ಅಸಿಸ್ಟೆಂಟ್ ಕರೆ ಮಾಡಿ ಸುಧಾಮೂರ್ತಿಯವರು ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಾರೆ ಎಂದು ತಿಳಿಸಿದ್ದಾರೆ ಎಂದು ಆಯೋಜಕರು ಹೇಳಿದ್ದಾರೆ.