ಚಾಮರಾಜನಗರ: ಚುನಾವಣಾ ತರಬೇತಿಗೆ ಬಂದಿದ್ದ ವೇಳೆ ವ್ಯಕ್ತಿಯೊಬ್ಬರು ಕುಸಿದುಬಿದ್ದು ಮೃತಪಟ್ಟಿರುವ ಘಟನೆ ಜಿಲ್ಲೆಯ ಹನೂರಲ್ಲಿ ನಡೆದಿದೆ. ಹನೂರು ವಿಧಾನಸಭಾ ಚುನಾವಣೆ ನಿಮಿತ್ತ ತರಬೇತಿಗೆ ಆಗಮಿಸಿದ್ದ ಜಗದೀಶ್(40) ಎಂಬುವವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಹನೂರು ಪಟ್ಟಣದ ವಿವೇಕನಂದಾ ಶಾಲೆಯಲ್ಲಿ ಮಂಗಳವಾರ ಎಆರ್ಒ ಹಾಗೂ ಪಿಆರ್ಒಗಳಿಗೆ ತರಬೇತಿ ಕಾರ್ಯಗಾರವನ್ನು ಹಮ್ಮಿಕೊಳ್ಳಲಾಗಿತ್ತು. ತರಬೇತಿ ಆರಂಭವಾಗುತ್ತಿದ್ದಂತೆ ಜಗದೀಶ್ ಎದೆನೋವಿನಿಂದ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಹೋಲಿಕ್ರಾಸ್ ಆಸ್ಪತ್ರೆಗೆ ಸಾಗಿಸುತ್ತಿದ್ದಾಗ ದಾರಿ ಮಧ್ಯೆದಲ್ಲಿಯೇ ಮೃತಪಟ್ಟಿದ್ದಾರೆ.