ಬೆಂಗಳೂರು: ಕಾಂಗ್ರೆಸ್ ಚುನಾವಣಾ ಸಂದರ್ಭದಲ್ಲಿ ನೀಡಿದ್ದ ಐದು ಗ್ಯಾರಂಟಿಗಳಲ್ಲಿ ಒಂದಾದ ಶಕ್ತಿ ಯೋಜನೆಯನ್ನು ಜಾರಿಗೆ ತಂದಿದೆ.
ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಅವಕಾಶ ಜಾರಿಗೆ ಬಂದಿದ್ದು ಇದರಿಂದ ಮಹಿಳೆಯರು ಆಟೋ ಮತ್ತು ಖಾಸಗಿ ಬಸ್ ಬಿಟ್ಟು ಕೆ ಎಸ್ ಆರ್ ಟಿ ಸಿ ಬಸ್ ಮೊರೆ ಹೋಗಿದ್ದಾರೆ. ಇದರಿಂದಾಗಿ ಖಾಸಗಿ ಬಸ್ ಮಾಲೀಕರು ಮತ್ತು ಸಿಬ್ಬಂದಿಗಳು ಮತ್ತು ಆಟೋರಿಕ್ಷಾ ಚಾಲಕರು ಸಂಕಷ್ಟಕ್ಕೆ ಸಿಲುಕುವಂತಾಗಿದೆ. ಇದೀಗ ಆಟೋ ಸಂಘಟನೆಗಳು ತಮ್ಮ ವಿವಿಧ ಬೇಡಿಕೆಗಳನ್ನು ಸರಕಾರದ ಮುಂದಿರಿಸಿ ಜುಲೈ 27ಕ್ಕೆ ಬಂದ್ ಗೆ ಕರೆ ಮುಂದಾಗಿದೆ. ಜುಲೈ 27ರಂದು ಬಂದ್ ಇರುವ ಕಾರಣ ಜುಲೈ 26ರ ಮಧ್ಯರಾತ್ರಿ 12 ಗಂಟೆಯಿಂದ ಜುಲೈ 27ರ ಮಧ್ಯರಾತ್ರಿ 12 ಗಂಟೆಯವರೆಗೆ ಓಲಾ ಉಬರ್ ಆಟೋ ಕ್ಯಾಬ್ ಮತ್ತು ಖಾಸಗಿ ಬಸ್ ಸಂಚಾರ ಇರೋದಿಲ್ಲ ಎಂದು ತಿಳಿಸಲಾಗಿದೆ.