ಮೈಸೂರು: ತನ್ನ ಜತೆಗಿರುವ ಪೋಟೊವನ್ನು ಹೆಂಡತಿಗೆ ಕಳುಹಿಸುವೆ ಎಂದು ಬೆದರಿಕೆ ಹಾಕಿ ವಿವಾಹಿತನಿಗೆ ೧೦ಲಕ್ಷಕ್ಕೆ ಬೇಡಿಕೆಯಿಟ್ಟ ಮಹಿಳೆಯ ವಿರುದ್ಧ ವಿಜಯನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ರಂಗನಾಥ್ ಎಂಬುವವರೆ ದೈವಿಕ ಎಂಬ ಮಹಿಳೆ ವಿರುದ್ಧವೇ ಇಂತಹದೊಂದು ದೂರು ದಾಖಲಿಸಿದ್ದಾರೆ. ರಂಗನಾಥ್ ಅವರ ಸ್ನೇಹಿತ ಕಲ್ಲೇಶ್ ಅವರ ಮೂಲಕ ದೇವಿಕ ಎಂಬುವವರು ಪರಿಚಿತರಾಗಿದ್ದಾರೆ. ಎರಡು-ಮೂರು ಭೇಟಿಗಳಲ್ಲಿ ದೇವಿಕ ರಂಗನಾಥ್ರನ್ನು ಪ್ರೀತಿಸುವ ಬಯಕೆ ವ್ಯಕ್ತಪಡಿಸಿದ್ದಾರೆ. ಈ ವೇಳೆ ಇದಕ್ಕೊಪ್ಪದ ರಂಗನಾಥ್ ದೇವಿಕ ಪ್ರೀತಿ ನಿರಾಕರಿಸಿದ್ದಾರೆ. ಇದಾಗಿಯೂ ಬೆಂಗಳೂರಿನ ಸ್ಯಾಟ್ಲೈಟ್ ಬಸ್ ನಿಲ್ದಾಣದಲ್ಲಿ ದೇವಿಕ ರಂಗನಾಥ್ ವಿರುದ್ಧ ತಿರುಗಿ ಬಿದ್ದಿದ್ದು, ಅವಾಚ್ಯ ಶಬ್ಧಗಳಿಂದಲೂ ನಿಂದಿಸಿದ್ದಾರೆ.
ಇದಾಗಿಯೂ ಮಾನಸಿಕವಾಗಿ ಹಣಕ್ಕಾಗಿ ಪೀಡಿಸಿದ್ದಾರೆ. ಇದರಿಂದಾಗ ಬೇಸತ್ತು ಪ್ರಾರಂಭದಲ್ಲಿ ೩೨೫೦೦ ರೂ.ಗಳನ್ನು ಸಹ ನೀಡಿರುತ್ತೇನೆ. ಇದಾದ ಬಳಿಕವೂ ದೇವಿಕ ಹಣ ನೀಡುವಂತೆ ದುಂಬಾಲು ಬಿದ್ದಿದ್ದು, ಹಣ ನೀಡಲು ನಿರಾಕರಿಸಿದ್ದೇನೆ. ಈ ಹಿನ್ನೆಲೆಯಲ್ಲಿ ಶ್ರೀನಿವಾಸ್ ಎಂಬುವವರನ್ನು ಮೈಸೂರಿಗೆ ಕಳುಹಿಸಿದ್ದು, ಆತ ೧೦ಲಕ್ಷ ರೂ. ನೀಡಿ ಇಲ್ಲದಿದ್ದರೆ ನಿನ್ನ ಹಾಗೂ ದೇವಿಕ ಅವರೊಂದಿಗಿರುವ ಚಿತ್ರಗಳನ್ನು ನಿಮ್ಮ ಪತ್ನಿಗೆ ಕಳುಹಿಸುವುದಾಗಿ ಬೆದರಿಕೆ ಹಾಕಿದ್ದಾರೆ. ಈ ಹಿನ್ನೆಲೆಯಲ್ಲಿ ದೇವಿಕ ಹಾಗೂ ಶ್ರೀನಿವಾಸ್ ವಿರುದ್ಧ ಜಾತಿ ನಿಂದನೆ ಹಾಗೂ ಬೇದರಿಕೆ ದೂರು ದಾಖಲಿಸಿರುವುದಾಗಿ ರಂಗನಾಥ್ ದೂರಿನಲ್ಲಿ ತಿಳಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ. ಅನ್ಯ ಮಹಿಳೆಯರ ಪರಿಚಯಕ್ಕೂ ಮುನ್ನ ಕೊಂಚ ಎಚ್ಚರದಿಂದಿರಿ ಎಂಬುದಷ್ಟೇ ಎಲ್ಲರ ಕಳಕಳಿಯಾಗಿದೆ.
ವಿವಾಹಿತನಿಗೆ 10ಲಕ್ಷಕ್ಕೆ ಬೇಡಿಕೆಯಿಟ್ಟ ಮಹಿಳೆ: ದೂರು ದಾಖಲು
