ಮೈಸೂರು: ಮೈಸೂರಿನ ನರಸಿಂಹ ರಾಜ ಕ್ಷೇತ್ರದ ಬಿಜೆಪಿ ಮುಖಂಡ ಊಟಿಯ ಕಾರು ಅಪಘಾತದಲ್ಲಿ ಮೃತ ಪಟ್ಟಿರುವ ಘಟನೆ ಗುರುವಾರ ಸಂಜೆ ನಡೆದಿದೆ.
ನರಸಿಂಹ ರಾಜ ಕ್ಷೇತ್ರದ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸ್ವಾಮಿಗೌಡ ಎಂಬುವವರ ಕಾರು ಅಪಘಾತದಲ್ಲಿ ಮೃತಪಟ್ಟವರಾಗಿದ್ದಾರೆ. ಕುಟುಂಬಸ್ಥರೊಂದಿಗೆ ಪ್ರವಾಸಕ್ಕೆ ತೆರಳಿದಾಗ ಈಘಟನೆ ನಡೆದಿದೆ. ಕಾರು ಪಲ್ಟಿ ಹೊಡೆದಿದ್ದು, ಬಿಜೆಪಿ ಮುಖಂಡನ ತಲೆಗೆ ಪೆಟ್ಟು ಬಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆನ್ನಲಾಗಿದೆ. ಇನ್ನೂ ಮಹಿಳೆ ಸೇರಿ ಅನೇಕರಿಗೂ ಗಾಯಗೊಂಡಿದ್ದು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ.