ರಾಮನಗರ:- ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯಲ್ಲಿ ಅಪಘಾತಗಳ ಸಂಖ್ಯೆಯನ್ನು ಕಡಿಮೆ ಮಾಡುವ ದೃಷ್ಟಿಯಿಂದ ಹಲವು ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು, ದಶಪಥ ಹೆದ್ದಾರಿಯಲ್ಲಿ ವೇಗವಾಗಿ ಹೋದರೆ ಪ್ರಕರಣ ದಾಖಲಿಸಲು ಪೆÇಲೀಸರು ಮುಂದಾಗಿದ್ದಾರೆ. ರಾಮನಗರ ಪೆÇಲೀಸರು ಹೆದ್ದಾರಿಯಲ್ಲಿ ಬ್ಯಾರಿಕೇಡ್ ಅಳವಡಿಸಿದ್ದು, ಸ್ಪೀಡ್ ರಾಡಾರ್ ಗನ್ ಮೂಲಕ ವಾಹನಗಳ ವೇಗವನ್ನು ಪರಿಶೀಲನೆ ಮಾಡುತ್ತಿದ್ದಾರೆ.
ಸೋಮವಾರದಿಂದಲೇ ರಾಮನಗರ ಪೆÇಲೀಸರು ಕಾರ್ಯಾಚರಣೆಗೆ ಇಳಿದಿದ್ದು, ವೇಗ ಮಿತಿ ಮೀರಿ ಚಲಿಸುವ ವಾಹನಗಳ ಸವಾರರ ಮೇಲೆ ಪ್ರಕರಣ ದಾಖಲಿಸಲಾಗುತ್ತಿದೆ. ಕರ್ನಾಟಕದ ಸಂಚಾರ ಮತ್ತು ರಸ್ತೆ ಸುರಕ್ಷತೆಯ ಎಡಿಜಿಪಿ ಅಲೋಕ್ ಕುಮಾರ್ ಈ ಬಗ್ಗೆ ಟ್ವೀಟ್ ಮಾಡಿದ್ದು, ವೇಗವಾಗಿ ಚಲಿಸಿದರೆ ಪ್ರಕರಣ ದಾಖಲಿಸಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, “ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಮಿತಿ ಮೀರಿದ ವೇಗದಲ್ಲಿ ಚಲಿಸುವ ವಾಹನಗಳನ್ನು ಸ್ಪೀಡ್ ರಾಡಾರ್ ಬಳಸಿಕೊಂಡು ಪತ್ತೆ ಹಚ್ಚಲಾಗುತ್ತಿದ್ದು, ಪ್ರಕರಣ ದಾಖಲಿಸಲಾಗುತ್ತಿದೆ. ಈ ಕ್ರಮ ತೆಗೆದುಕೊಂಡಿರುವ ರಾಮನಗರ ಎಸ್ಪಿ ಮತ್ತು ಅವರ ತಂಡವನ್ನು ಶ್ಲಾಘಿಸುತ್ತೇನೆ. ಜೀವ ಉಳಿಸಲು ಸಂಚಾರ ನಿಯಮಗಳನ್ನು ಪಾಲಿಸಿ, ದಂಡದ ಹಣವನ್ನು ಉಳಿಸಲು ಅಲ್ಲ” ಎಂದು ವಾಹನ ಸವಾರರಿಗೆ ಮನವಿ ಮಾಡಿದ್ದಾರೆ.
ಬೆಂಗಳೂರು-ಮೈಸೂರು ಹೆದ್ದಾರಿ ಅಪಘಾತಗಳ ಸಂಖ್ಯೆಯಿಂದ ಭಾರಿ ಟೀಕೆಗೆ ಒಳಗಾಗಿದೆ. ಜನವರಿಯಿಂದ ಈವರೆಗೆ ಈ ಹೆದ್ದಾರಿಯಲ್ಲಿ 500ಕ್ಕೂ ಹೆಚ್ಚು ಅಪಘಾತಗಳು ಸಂಭವಿಸಿದ್ದು 60ಕ್ಕೂ ಹೆಚ್ಚು ಜನ ಮೃತಪಟ್ಟಿದ್ದಾರೆ. ರಸ್ತೆಯ ಇಕ್ಕೆಲಗಳಲ್ಲಿ ಇರುವ ಗ್ರಾಮಗಳ ಜನ ರಸ್ತೆ ದಾಟಲು ಅಂಡರ್ ಪಾಸ್ ನಿರ್ಮಾಣ ಮಾಡಿಲ್ಲ, ಕೆಲವು ಕಡೆ ಅಂಡರ್ ಪಾಸ್ಗಳನ್ನು ಹಳ್ಳಿಗಳಿಂದ ದೂರದಲ್ಲಿ ನಿರ್ಮಾಣ ಮಾಡಲಾಗಿದೆ ಎಂದು ಅಸಮಾಧಾನ ವ್ಯಕ್ತವಾಗಿದೆ. ಹಲವು ಕಡೆಗಳಲ್ಲಿ ರಸ್ತೆಗೆ ಹಾಕಿರುವ ಬೇಲಿಯನ್ನು ಮುರಿದು ಜನ ರಸ್ತೆ ದಾಟುತ್ತಿರುವುದು ಕೂಡ ಅಪಘಾತಗಳಿಗೆ ಕಾರಣವಾಗಿದೆ.