ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಮುಂಗಾರು ಮಳೆ ಸುರಿಯುತ್ತಿದ್ದು, ಕೆಆರ್ಎಸ್ ಅಣೆಕಟ್ಟು 100 ಅಡಿ ಭರ್ತಿಯಾಗಿದೆ.
ಕಳೆದ 15 ದಿನಗಳಿಂದ ಕಾವೇರಿ ಜಲಾನಯನ ಪ್ರದೇಶದಲ್ಲಿ ಮುಂಗಾರು ಚುರುಕುಗೊಂಡಿದೆ. ಕಾವೇರಿ ಜಲಾನಯನ ಪ್ರದೇಶದಲ್ಲಿ ಮುಂಗಾರು ಇನ್ನಷ್ಟು ಚುರುಕುಗೊಂಡರೆ ಶೀಘ್ರ ಕೆಆರ್ಎಸ್ ಭರ್ತಿಯಾಗಲಿದೆ.
ಕೆಆರ್ಎಸ್ ಡ್ಯಾಂಗೆ ಎರಡು ವಾರದಿಂದ ಸರಾಸರಿ 10 ಸಾವಿರ ಕ್ಯೂಸೆಕ್ಗೆ ಒಳಹರಿವು ಬರುತ್ತಿದೆ. ಇದರ ಬೆನ್ನಲ್ಲೇ ಇದೀಗ ಕೆಆರ್ಎಸ್ ಡ್ಯಾಂ 100 ಅಡಿ ಭರ್ತಿಯಾಗಿದೆ.
ಕೆಆರ್ಎಸ್ ಅಣೆಕಟ್ಟು 100 ಅಡಿ ಭರ್ತಿಯಾದ ಹಿನ್ನೆಲೆ ರೈತರ ಮುಖದಲ್ಲಿ ಮಂದಹಾಸ ಮೂಡಿದೆ.
ಇಂದಿನ ಕೆಆರ್ಎಸ್ ನೀರಿನ ಮಟ್ಟ:
ಗರಿಷ್ಠ ಮಟ್ಟ – 124.80 ಅಡಿ.
ಇಂದಿನ ಮಟ್ಟ – 100.30 ಅಡಿ.
ಗರಿಷ್ಠ ಸಾಂದ್ರತೆ – 49.452 ಟಿಎಂಸಿ
ಇಂದಿನ ಸಾಂದ್ರತೆ – 23.047 ಟಿಎಂಸಿ
ಒಳ ಹರಿವು – 9,686 ಕ್ಯೂಸೆಕ್
ಹೊರ ಹರಿವು – 546 ಕ್ಯೂಸೆಕ್